ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

Update: 2019-11-21 17:51 GMT

ಬೆಂಗಳೂರು, ನ.21: ಕರ್ನಾಟಕ ಲಲಿತಕಲಾ ಅಕಾಡೆಮಿಯು 2019ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಚಿತ್ರಕಲೆಗೆ ಸಂಬಂಧಿಸಿದ ವಿವಿಧ ಪ್ರಕಾರದ ಕನ್ನಡ ಪುಸ್ತಕಗಳನ್ನು ಪ್ರಶಸ್ತಿಗೆ ಆಹ್ವಾನಿಸಲಾಗಿದೆ.

ಪ್ರತಿ ಪ್ರಕಾರದಲ್ಲಿ ತೀರ್ಪುಗಾರರು ಆಯ್ಕೆ ಮಾಡುವ ಒಂದು ಪುಸ್ತಕಕ್ಕೆ ಬಹುಮಾನ ನೀಡಲಾಗುವುದು. ಆವೃತ್ತಿಯಾಗಿ ಪ್ರಕಟವಾಗಿರುವ ಪುಸ್ತಕಗಳಾಗಿರಬೇಕು. ಪುಸ್ತಕದ ತಾಂತ್ರಿಕ ಪುಟದಲ್ಲಿ ಮುದ್ರಣ 2018ಯೆಂದು ಮುದ್ರಿತವಾಗಿರಬೇಕು. ಇಷ್ಟು ಅರ್ಹತೆ ಹೊಂದಿದ್ದರೆ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸಬಹುದಾಗಿದೆ.

ಪುಸ್ತಕದ ಬಹುಮಾನದ ಮೊತ್ತ 25 ಸಾವಿರ ರೂ.ಆಗಿದ್ದು, ಈ ಪುಸ್ತಕಗಳು ಯಾವುದೇ ತರಗತಿಗಳಿಗೆ ಹಾಗೂ ವಿಶ್ವ ವಿದ್ಯಾಲಯಗಳಿಗೆ ಪಠ್ಯಪುಸ್ತಕವಾಗಿರಬಾರದು. ಪುಸ್ತಕವು ಕನಿಷ್ಟ 100ಕ್ಕೂ ಹೆಚ್ಚು ಪುಟಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವವರು ತಲಾ 4ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿರಸ್ತೆ, ಬೆಂ.02, ಗೆ ಕಳುಹಿಸಿಕೊಡಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News