ಸಂವಿಧಾನ ಕುರಿತ ನನ್ನ ಮಾತನ್ನು ತಿರುಚಲಾಗಿದೆ: ಚಿ.ನಾ.ರಾಮು

Update: 2019-11-21 18:35 GMT

ಬೆಂಗಳೂರು, ನ.21: ಮೀಸಲಾತಿ ಹೇಳಿಕೆ ಬಗ್ಗೆ ತನ್ನ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಕಪೋಲಕಲ್ಪಿತ ಸುದ್ದಿ ಹರಿಬಿಟ್ಟು, ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ. ಇಂತವರ ವಿರುದ್ಧ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರಾಧ್ಯಕ್ಷ ಡಾ.ಚಿ.ನಾ.ರಾಮು ಒತ್ತಾಯಿಸಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ರೂಪಿಸಿದ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಇದನ್ನು ನಾನು ವಿರೋಧಿಸಿದ್ದರಿಂದ ನನ್ನ ವಿರುದ್ಧ ಸುಳ್ಳು ಸುದ್ದಿಗಳನ್ನು ಹರುಡುವ ಮೂಲಕ ಸಮಾಜದ ಶಾಂತಿ, ಸುವ್ಯವಸ್ಥೆ ಕದಡಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಮೀಸಲಾತಿ ಕುರಿತು ನಾನು ಮಾತನಾಡಿದ ಆರು ನಿಮಿಷಗಳ ಕಾಲದ ವೀಡಿಯೋವನ್ನು ತಿರುಚಿ ಕೇವಲ ಒಂದು ನಿಮಿಷಕ್ಕೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಹಾಗೂ ಉಪಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News