ಕಳಸ: ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ
Update: 2019-11-22 11:24 GMT
ಚಿಕ್ಕಮಗಳೂರು, ನ.22: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಸ ಹೋಬಳಿ ಹಿರೇಬೈಲು ಗ್ರಾಮದ ಕೋರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಕೊಪ್ಪ ತಾಲೂಕಿನ ಬಸರಿಕಟ್ಟೆ ಗ್ರಾಮದ ನಿವಾಸಿ ಸತೀಶ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಾನು ಪ್ರೀತಿಸುತ್ತಿದ್ದ ಯುವತಿ ವಿವಾಹಕ್ಕೆ ನಿರಾಕರಿಸಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿಯೂ, ತನ್ನ ಸಾವಿಗೆ ಆ ಯುವತಿಯೇ ಕಾರಣ ಎಂದು ಸತೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ತಾನು ಪ್ರೀತಿಸುತ್ತಿದ್ದ ಯುವತಿಯ ಗ್ರಾಮವಾದ ಹಿರೇಬೈಲಿಗೆ ತೆರಳಿ ಅಲ್ಲಿ ಸತೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.