ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-11-22 16:43 GMT

ಬ್ರಹ್ಮಾವರ, ನ.22: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಕ್ಕರ್ಣೆಯ ತೆಂಕಬೈಲು ಸಮೀಪದ ಹೊರ್ಲಾಳಿ ನಿವಾಸಿ ನಾಗಪ್ಪನಾಯ್ಕ(52) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.21ರಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕುಂದಾಪುರ: ಹೃದಯ ಸಂಬಂದಿ ಖಾಯಿಲೆಯಿಂದ ಬಳುತ್ತಿದ್ದ ತಲ್ಲೂರು ಗರಡಿಮನೆಯ ಗೋಪಾಲ ಪೂಜಾರಿ(62) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.22ರಂದು ನಸುಕಿನ ವೇಳೆ ಮನೆಯಲ್ಲಿ ಕೃಷಿ ಕೆಲಸಕ್ಕೆಂದು ತಂದಿರಿಸಿದ್ದ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News