ಶಿವಾಜಿನಗರ ಕ್ಷೇತ್ರ ಕಾಂಗ್ರೆಸ್ ವೀಕ್ಷಕರಾಗಿ ವಿ.ಶಂಕರ್ ನೇಮಕ

Update: 2019-11-22 16:45 GMT

ಬೆಂಗಳೂರು, ನ. 22: ಉಪಚುನಾವಣೆ ಹಿನ್ನೆಲೆಯಲ್ಲಿ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕರನ್ನಾಗಿ ಎನ್‌ಜಿಇಎಫ್ ಮಾಜಿ ಅಧ್ಯಕ್ಷ ಹಾಗೂ ಮುಖಂಡ ವಿ.ಶಂಕರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಆದೇಶ ಹೊರಡಿಸಿದ್ದಾರೆ.

ಕೂಡಲೇ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಜಿಲ್ಲಾ/ಬ್ಲಾಕ್ ಅಧ್ಯಕ್ಷರ ಸಹಕಾರದೊಂದಿಗೆ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಬೇಕು. ಅಲ್ಲದೆ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News