ಮಹಾರಾಷ್ಟ್ರ: ಬಿಜೆಪಿ ಸರಕಾರ ರಚನೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ, ಎನ್ ಸಿಪಿ, ಕಾಂಗ್ರೆಸ್

Update: 2019-11-23 14:12 GMT

ಮುಂಬೈ, ನ.23: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಯನ್ನು ವಿರೋಧಿಸಿ ಶಿವಸೇನೆ, ಎನ್ ಸಿಪಿ, ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ತಾರತಮ್ಯದ ಕ್ರಮ ಕೈಗೊಂಡಿದ್ದಾರೆ ಎಂದು ಶಿವಸೇನೆ ಅರ್ಜಿಯಲ್ಲಿ ಆರೋಪಿಸಿದೆ.

ಗೌರವಾನ್ವಿತ ರಾಜ್ಯಪಾಲರು ಬಿಜೆಪಿಯ ಅಕ್ರಮ ಅತಿಕ್ರಮಣದ ರಾಜಕಾರಣಕ್ಕೆ ಅವಕಾಶ ನೀಡುವ ಮೂಲಕ ತನ್ನ ಸಾಂವಿಧಾನಿಕ ಕಚೇರಿಯ ಘನತೆಯನ್ನು ಕುಂದಿಸಿದ್ದಾರೆ ಎಂದು ಶಿವಸೇನೆಯು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News