ವಿಮಾನ ನಿಲ್ದಾಣಕ್ಕಾಗಿ ದೇವಾಲಯ ನೆಲಸಮ ?

Update: 2019-11-23 16:43 GMT

ಕಲಬುರಗಿ, ನ.23: ಕಲಬುರಗಿ ವಿಮಾನ ನಿಲ್ದಾಣಕ್ಕಾಗಿ, ದೇವಾಲಯವೊಂದನ್ನು ನೆಲಸಮಗೊಳಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಲ್ಲಿನ ಮಡಿಹಾಳ ತಾಂಡಾ ಹಾಗೂ ಶ್ರೀನಿವಾಸ ಸರಡಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನೆ ನಡೆಸಿದ ತಾಂಡಾ ಸಮುದಾಯದ ಪ್ರಮುಖರು, ಜಗದಾಂಬ ದೇವಸ್ಥಾನವನ್ನು ಉದ್ದೇಶ ಪೂರ್ವಕವಾಗಿ ಧ್ವಂಸಗೊಳಿಸಲಾಗಿದೆ ಎಂದು ದೂರಿದರು.

ವಿಮಾನ ನಿಲ್ದಾಣಕ್ಕಾಗಿ ತಾಂಡಾದ ಭೂಮಿ ಬಿಟ್ಟುಕೊಡಲಾಗಿದೆ. ಆದರೆ, ಈ ಪ್ರದೇಶದಲ್ಲಿದ್ದ ಜಗದಾಂಬ ದೇವಸ್ಥಾನ ನೆಲಸಮಗೊಳಿಸಿದ್ದಾರೆ. ಈ ಸಂಬಂಧ ವಿಮಾನ ನಿಲ್ದಾಣ ಪ್ರಾಧಿಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News