ಅಯೋಧ್ಯೆಯಲ್ಲಿ ಭವ್ಯ ಮಂದಿರವನ್ನು ಕಾಂಗ್ರೆಸ್ ಬಯಸಿದೆ: ಸಚಿನ್ ಪೈಲಟ್

Update: 2019-11-23 16:44 GMT

ಜೈಪುರ, ನ.23: ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಗೊಳ್ಳಬೇಕೆಂದು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಹೇಳಿದ್ದಾರೆ.

ದೌಸಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು,ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ಮಂದಿರ ನಿರ್ಮಾಣದ ಪರವಾಗಿ ಸರ್ವೋಚ್ಚ ನ್ಯಾಯಾಲಯದ ತೀರ್ಪು ಎಲ್ಲರಿಗೂ ಸ್ವೀಕಾರಾರ್ಹವಾಗಿದೆ ಮತ್ತು ಈ ವಿಷಯದಲ್ಲಿ ರಾಜಕೀಯ ಈಗ ಅಂತ್ಯಗೊಳ್ಳಬೇಕು ಎಂದರು.

ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸಬೇಕು ಮತ್ತು ಅದನ್ನು ಪಾಲಿಸಬೇಕು. ಅಯೋಧ್ಯೆ ವಿಷಯವನ್ನು ಮತ್ತೆ ಎತ್ತುವುದರಿಂದ ಯಾರಿಗೂ ಲಾಭವಿಲ್ಲ ಎನ್ನುವುದನ್ನು ಕಳೆದ 30 ವರ್ಷಗಳಿಂದ ಈ ಬಗ್ಗೆ ರಾಜಕೀಯ ಮಾಡಿಕೊಂಡು ಬಂದಿರುವವರು ಅರ್ಥ ಮಾಡಿಕೊಳ್ಳಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News