ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮ ಪಕ್ಷಕ್ಕೆ ಬಂದರೆ....: 'ಕೈ' ಶಾಸಕಿ ಬಗ್ಗೆ ಲಕ್ಷ್ಮಣ ಸವದಿ ಹೇಳಿದ್ದೇನು ?

Update: 2019-11-24 12:52 GMT

ಬೆಳಗಾವಿ, ನ. 24: ಉಪಚುನಾವಣೆ ಬಳಿಕ ಇನ್ನಷ್ಟು ಜನ ಮುಖಂಡರು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದಿಲ್ಲಿ ಹೇಳಿದ್ದಾರೆ.

ರವಿವಾರ ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಬಹುತೇಕರಿಗೆ ಮನವರಿಕೆಯಾಗಿದೆ. ಬಿಜೆಪಿಗೆ ಬಂದರೆ ಭವಿಷ್ಯವಿದೆ ಎಂದು ಅನೇಕರಿಗೆ ಗೊತ್ತಾಗಿದೆ ಎಂದು ಇದೇ ವೇಳೆ ತಿಳಿಸಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮ ಸಹೋದರಿ, ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ. ‘ಬೆಳಗಾವಿ ರಾಜಕೀಯ ಬದಲಿಸಬಲ್ಲೆ’ ಎಂದು ಅವರು ಅದೇ ಕಾರಣಕ್ಕೆ ಹೇಳಿರಬಹುದು. ಅವರು ಸಿಕ್ಕರೆ ಈ ಬಗ್ಗೆ ಮಾತನಾಡುತ್ತೇನೆ. ರಾಜಕೀಯ ದೃವೀಕರಣ ಹಿನ್ನೆಲೆ ಅವರು ತಮ್ಮ ಪಕ್ಷ ಬಿಟ್ಟು ನಮ್ಮಲ್ಲಿ ಬರಬಹುದು ಎಂದರು.

ಅಥಣಿ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಆಗಬೇಕೆಂದು ಕಾರ್ಯಕರ್ತರು ಬಯಸಿದ್ದರು. ಹೀಗಾಗಿ ಕಾರ್ಯಕರ್ತರಲ್ಲಿ ಗೊಂದಲಗಳಿದ್ದವು. ಸಿಎಂ ಚರ್ಚೆಯ ಬಳಿಕ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದ್ದು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ನಿರ್ಧರಿಸಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News