ದೇಶದ ಹಿತಕ್ಕಾಗಿ ಎನ್‌ಸಿಪಿ ಜೊತೆ ಮೈತ್ರಿ: ನಳಿನ್ ಕುಮಾರ್ ಕಟೀಲ್

Update: 2019-11-24 13:51 GMT

ಬೆಂಗಳೂರು, ನ.24: ದೇಶದ ಹಿತಕ್ಕಾಗಿಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರವಿವಾರ ಇಲ್ಲಿನ ಮಹಾಲಕ್ಷ್ಮೀಲೇಔಟ್‌ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಪರ ಪ್ರಚಾರದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ರಾಷ್ಟ್ರದ ಹಿತದೃಷ್ಟಿಯಿಂದ ಕೆಲ ಯೋಚನೆಗಳನ್ನು ರಾಜಕೀಯವಾಗಿ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಅಸುರ ಚಿಂತನೆ ಸಾಕು, ಈಗ ರಾಮನ ಚಿಂತನೆ ಮಾಡಬೇಕಿದೆ. ಈ ಹಿನ್ನೆಲೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದ ಅವರು, ನಾವು ಮೂರು ತಿಂಗಳು ವನವಾಸ ಅನುಭವಿಸಿದರೂ, ಚಿಂತೆಯಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಬೇಕು ಎಂದು ಪಕ್ಷದಿಂದ ಮಂತ್ರಿಯಾಗಿದ್ದ ನಾಯಕರೇ ಹೊರ ಬಂದಿದ್ದಾರೆ. ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News