ಕಡಬ : ಸರಣಿ ಅಪಘಾತ ; ಬೈಕ್ ಸವಾರ, ರಿಕ್ಷಾ ಪ್ರಯಾಣಿಕರಿಗೆ ಗಾಯ

Update: 2019-11-25 06:47 GMT

ಕಡಬ, ನ. 25: ಕಾರೊಂದು ಆಟೋರಿಕ್ಷಾ ಮತ್ತು ಬೈಕಿಗೆ ಸರಣಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಪುತ್ತೂರು ಮಾರ್ಗದ ಪಂಜ ಸಮೀಪದ ಕುಳಾಯಿತ್ತೋಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ.

ಪಂಜದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ  ಕಾರೊಂದು ಕುಳಾಯಿತ್ತೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಆ ಬಳಿಕ ಬೈಕಿಗೆ ಢಿಕ್ಕಿಯಾಗಿದೆ.

ಘಟನೆಯಲ್ಲಿ ರಿಕ್ಷಾವು ಮಗುಚಿ ಬಿದ್ದಿದ್ದು, ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡಿದ್ದಾರೆ. ಬೈಕ್  ಸವಾರ ಎಣ್ಮೂರು ನಿವಾಸಿ ಮಹಮ್ಮದ್ ಎಂಬವರ ಪುತ್ರ ರಫೀಕ್ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News