ನ.26: ಕಾನೂನು ದಿನಾಚರಣೆ
Update: 2019-11-25 21:13 IST
ಮಂಗಳೂರು, ನ.25: ಮಂಗಳೂರು ಬಿಎಆರ್ ಅಸೋಸಿಯೇಶನ್ (ರಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ದಿನಾಚರಣೆಯು ನ.26ರಂದು ಸಂಜೆ 5:30ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ನಿವೃತ್ತ ನ್ಯಾಯಮೂರ್ತಿ ಎ. ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮತ್ತು ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಕಡ್ಲೂರ್ ಸತ್ಯನಾರಾಯಣ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.