ನೆಟ್ಟಣ: ರೈಲಿನಡಿಗೆ ತಲೆಯಿಟ್ಟು ಉಳ್ಳಾಲದ ಯುವಕ ಆತ್ಮಹತ್ಯೆ

Update: 2019-11-26 08:22 GMT

ನೆಟ್ಟಣ, ನ.26: ರೈಲಿನಡಿಗೆ ತಲೆಯಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ನಡೆದಿದೆ.

ಮೃತದೇಹದ ಬಳಿ ಬ್ಯಾಂಕ್ ಪಾಸ್ ಪುಸ್ತಕವೊಂದು ದೊರೆತಿದ್ದು, ಅದರಲ್ಲಿ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಪವನ್ ಕುಮಾರ್ ಎಂಬ ವಿಳಾಸವಿತ್ತೆಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ರೈಲ್ವೆ ಹಳಿಯಲ್ಲಿ ಸ್ಥಳೀಯ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಯುವಕನ ಮೃತದೇಹವು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಅವರು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ಸುಮಾರು ಮೂವತ್ತು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News