ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಹಾಸನದಲ್ಲಿ ಬಂಧನ
Update: 2019-11-26 04:33 GMT
ಮಂಗಳೂರು, ನ.26: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪಣಂಬೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕಲ್ಲಹಳ್ಳಿ ನಿವಾಸಿ ಪ್ರದೀಪ್ ಕುಮಾರ್(26) ಬಂಧಿತ ಆರೋಪಿ. ಈತನನ್ನು ಹಾಸನ ಜಿಲ್ಲೆಯ ಅರಕಲಗೂಡುವಿನಲ್ಲಿ ಬಂಧಿಸಿದ ಪಣಂಬೂರು ಪೊಲೀಸರು, ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.