ಸಂಸದರಾಗಿ ಅಭಿವೃದ್ಧಿ ಮಾಡದ ನಳಿನ್, ರಾಜ್ಯಾಧ್ಯಕ್ಷರಾಗಿ ಏನು ಮಾಡುತ್ತಾರೆ ?

Update: 2019-11-26 15:42 GMT

ಬೆಂಗಳೂರು, ನ.26: ಸಂಸದರಾಗಿಯೇ ನಳಿನ್ ಕುಮಾರ್ ಕಟೀಲ್ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಏನು ಮಾಡುತ್ತಾರೆ ಎಂದು ಮಾಜಿ ಸಚಿವ ಕೆ.ಜೆ.ಜಾರ್ಜ್ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಕೆಆರ್‌ಪುರಂನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಯಾರೆಂದು ಈಗ ಗೊತ್ತಾಗಿದೆ. ಅವರು ಸಾಧನೆ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಶಾಸಕ ನಂದೀಶ್ ರೆಡ್ಡಿ ಅವರು ಈ ಹಿಂದೆ ಬೈರತಿ ಬಸವರಾಜ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆದರೆ, ಈಗ ಅವರ ಪರವಾಗಿಯೇ ಕೆಲಸ ಮಾಡುತ್ತಿದ್ದಾರೆ. ಇಂತವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಕೆಆರ್‌ಪುರಂನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಬಿಜೆಪಿ ಆಡಳಿತದ ವಿರುದ್ದ ಜನರಿಗೆ ಆಕ್ರೋಶವಿದೆ. ಪ್ರವಾಹದ ವೇಳೆ ಕೇಂದ್ರ ಸರಕಾರ ಸರಿಯಾಗಿ ಸ್ಪಂದನೆ ಮಾಡಿಲ್ಲ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News