ಆಸ್ಪತ್ರೆಯಿಂದ ಶಾಸಕ ತನ್ವೀರ್ ಸೇಠ್ ಡಿಸ್ಚಾರ್ಜ್
Update: 2019-11-26 17:01 GMT
ಮೈಸೂರು,ನ.26: ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರನ್ನು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ನವೆಂಬರ್ 17 ರ ರವಿವಾರ ರಾತ್ರಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಬಳಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಶಾಸಕ ತನ್ವೀರ್ ಸೇಠ್ ಭಾಗಿಯಾಗಿದ್ದರು. ಈ ವೇಳೆ ಶಾಸಕ ತನ್ವೀರ್ ಸೇಠ್ ಮೇಲೆ ಫರ್ಹಾನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ ಸಿಕ್ಕಿ ಬಿದ್ದಿದ್ದ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ತನ್ವೀರ್ ಸೇಠ್ ಅವರು ಹಲ್ಲೆಯಿಂದ ತೀವ್ರ ಬಳಲಿದ್ದರು. ಹೀಗಾಗಿ ಅವರನ್ನು ನೋಡಲು ಅನೇಕ ರಾಜಕೀಯ ಮುಖಂಡರು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಇದೀಗ 9 ದಿನಗಳ ನಂತರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.