ಅಡ್ಕ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ: ಗಾಯಾಳು ಯುವಕ ಆಸ್ಪತ್ರೆಯಲ್ಲಿ ಮೃತ್ಯು

Update: 2019-11-27 05:24 GMT

ಮಂಜೇಶ್ವರ, ನ.27: ದ್ವಿಚಕ್ರ ವಾಹನವೊಂದಕ್ಕೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ.

ಆರಿಕ್ಕಾಡಿ ಕುನ್ನಿಲ್ ನಿವಾಸಿ ಅಬೂಬಕರ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (34) ಮೃತಪಟ್ಟವರು. ಮುಹಮ್ಮದ್ ಶರೀಫ್ ಮಂಗಳವಾರ ಬೆಳಗ್ಗೆ ಪತ್ನಿ ಮನೆಯಿಂದ ಸ್ಕೂಟರ್‌ನಲ್ಲಿ ನಾದಿನಿ ಮುನೀರಾ(19) ಎಂಬವರನ್ನು ಕರೆದುಕೊಂಡು ಬಂದ್ಯೋಡಿನತ್ತ ತೆರಳುತ್ತಿದ್ದ ವೇಳೆ ಅಡ್ಕ ಒಳಯಂ ಬಳಿ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಶರೀಫ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ವೇಳೆ ಗಾಯಗೊಂಡಿರುವ ಮುನೀರಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆಯ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News