×
Ad

ಮಂಗಳೂರು : ಟಿಪ್ಪರ್ ಢಿಕ್ಕಿ ; ದ್ವಿಚಕ್ರ ವಾಹನ ಸವಾರೆ ಮೃತ್ಯು

Update: 2019-11-27 18:01 IST

ಮಂಗಳೂರು, ನ. 27: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳೀಯ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಕುಂಟಿಕಾನ ಹೆದ್ದಾರಿಯ ಖಾಸಗಿ ಹೋಟೆಲ್ ಸಮೀಪ ಬುಧವಾರ ನಡೆದಿದೆ.

ಕಾವೂರು ನಿವಾಸಿ ಪ್ರಿಯಾ ಸುವರ್ಣ (42) ಮೃತರು ಎಂದು ಗುರುತಿಸಲಾಗಿದೆ. 

ಅವರು ದ್ವಿಚಕ್ರ ವಾಹನದಲ್ಲಿ ಮನೆಯಿಂದ ಕೆಪಿಟಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಸುವರ್ಣ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News