ರಸ್ತೆ ಅಪಘಾತ : ಗಾಯಾಳು ಯುವಕ ಮೃತ್ಯು
Update: 2019-11-27 17:21 GMT
ಮಂಜೇಶ್ವರ : ಸ್ಕೂಟರ್ ಗೆ ಪಿಕಪ್ ವ್ಯಾನ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತ ಯುವಕನನ್ನು ಆರಿಕ್ಕಾಡಿ ಕುನ್ನಿಲ್ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಮೊಹಮ್ಮದ್ ಶರೀಫ್ (34) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಶರೀಫ್ ಅವರಿಗೆ ಎದುರಿನಿಂದ ಬಂದ ಪಿಕಪ್ ವ್ಯಾನ್ ಢಿಕ್ಕಿ ಹೊಡೆದು ಅಡ್ಕ ಒಳಯಂ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಿಂದ ಗಂಭೀರ ಗಾಯಗೊಂಡ ಶರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಶರೀಫ್ ನ ಜೊತೆಗಿದ್ದ ಸಂಬಂಧಿಕರಾದ ಮುನೀರ(19) ಗಾಯಗೊಂಡು ಚಿಕಿತ್ಸೆಯಲ್ಲಿದ್ದಾರೆ. ಕುಂಬಳೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.