ಯುವತಿ ನಾಪತ್ತೆ

Update: 2019-11-28 17:53 GMT

ಕಡಬ, ನ.28. ಕೆಲಸಕ್ಕೆಂದು ತೆರಳಿದ್ದ ಕಡಬದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಈ ಬಗ್ಗೆ ಆಕೆಯ ತಾಯಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಾಪತ್ತೆಯಾದ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬೇರಿಕೆ ನಿವಾಸಿ ಮೋನಪ್ಪ ಕುಂಬಾರ ಎಂಬವರ ಪುತ್ರಿ  ಶ್ವೇತಾ ಎಂದು ಗುರುತಿಸಲಾಗಿದೆ.

ಈಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನಗೆ ಕೆಲಸ‌ ಸಿಕ್ಕಿದೆಯೆಂದು ಹೇಳಿ ಕಳೆದ ಆಗಸ್ಟ್ 12 ರಂದು ಮನೆಯಿಂದ ತೆರಳಿದ್ದು, ಆ ಬಳಿಕ ತಿಂಗಳಲ್ಲಿ ಒಂದು ಸಲ ಕರೆ ಮಾಡಿದ್ದಾಳೆ ಎನ್ನಲಾಗಿದೆ. ಇದೀಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಆಕೆಯ ತಾಯಿ ಕಡಬ ಠಾಣೆಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News