ಸಿದ್ದರಾಮಯ್ಯ ಒಬ್ಬ ಹುಚ್ಚ: ಸಚಿವ ಈಶ್ವರಪ್ಪ

Update: 2019-11-29 12:21 GMT

ಹುಬ್ಬಳ್ಳಿ, ನ. 29: ‘ಉಪಚುನಾವಣೆಯಲ್ಲಿ ಬಿಜೆಪಿ ಎಂಟು ಸ್ಥಾನ ಗೆಲ್ಲದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಕಾಂಗ್ರೆಸ್ ಅಷ್ಟು ಸ್ಥಾನ ಗೆಲ್ಲದಿದ್ದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸವಾಲು ಸ್ವೀಕರಿಸುವರೇ?’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಹುಚ್ಚ. ಸದಾ ಅಧಿಕಾರಕ್ಕೆ ಹಂಬಲಿಸುವ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನದ ಹುಚ್ಚಿನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಏಕವಚನದಲ್ಲೆ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನ ಯಾವ ನಾಯಕರೂ ಸಿದ್ದರಾಮಯ್ಯ ಜೊತೆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕುರುಬ ಹಾಗೂ ದಲಿತ ಸಮುದಾಯದ ನಾಯಕರನ್ನು ಅವರು ಬೆಳೆಯಲು ಬಿಡಲಿಲ್ಲ. ವಿಶ್ವನಾಥ ಅವರನ್ನು ಮುಗಿಸಲು ಹೆಜ್ಜೆ ಹೆಜ್ಜೆಗೂ ಪ್ರಯತ್ನಿಸಿದರು ಎಂದು ಈಶ್ವರಪ್ಪ ದೂರಿದರು.

ಉಪಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಎಲ್ಲ ಕಡೆ ಹೇಳಿಕೊಳ್ಳುತ್ತಿದ್ದಾನೆ. ಇದನ್ನು ಭ್ರಮೆಯೋ, ಹಗಲು ಕನಸೋ ಗೊತ್ತಾಗುತ್ತಿಲ್ಲ ಎಂದ ಅವರು, ಲೋಕಸಭಾ ಚುನಾವಣೆಯಲ್ಲಿ ಅಪ್ಪನನ್ನೇ ಗೆಲ್ಲಿಸಲು ಸಾಧ್ಯವಾಗದ ಎಚ್‌ಡಿಕೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವರೇ? ಎಂದು ಲೇವಡಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News