ಈರುಳ್ಳಿ ಮಾಲೆ ಧರಿಸಿ ಪ್ರತಿಭಟನೆ

Update: 2019-11-29 17:48 GMT

ಗುವಾಹಟಿ, ನ. 29: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ಅಸ್ಸಾಂ ವಿಧಾನ ಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನ ಸದಸ್ಯರು ಈರುಳ್ಳಿ ಮಾಲೆ ಹಾಕಿ ಪ್ರತಿಭಟನೆ ನಡೆಸಿದರು.

ಈರುಳ್ಳಿ ಬೆಲೆ ಏರಿಕೆ ತಡೆಯಲು ವಿಫಲವಾದ ಬಿಜೆಪಿ ನೇತೃತ್ವದ ಅಸ್ಸಾಂ ಸರಕಾರದ ವಿರುದ್ಧ ವಿಧಾನ ಸಭೆಯ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಶುಕ್ರವಾರ ಕಾಂಗ್ರೆಸ್ ಶಾಸಕರು ಘೋಷಣೆಗಳನ್ನು ಕೂಗಿದರು.

ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಲು ಮೋದಿ ಸರಕಾರ ಕಾರಣ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದರು.

‘‘ಈರುಳ್ಳಿ ಬೆಲೆ ಏರಿಕೆಯನ್ನು ರಾಜ್ಯ ಸರಕಾರ ಒಪ್ಪಿಕೊಂಡಿದೆ’’ ಎಂದು ಕಾಂಗ್ರೆಸ್ ಶಾಸಕ ರಕೀಬುದ್ದೀನ್ ಅಹ್ಮದ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News