ಸುರತ್ಕಲ್ ನಲ್ಲಿ ಯುವಕನ ಹತ್ಯೆ

Update: 2019-11-30 03:34 GMT

ಮಂಗಳೂರು : ಸುರತ್ಕಲ್ ನಲ್ಲಿರುವ ಬಾರೊಂದರ ಸಮೀಪ ಯುವಕನ ಕೊಲೆ ಘಟನೆ ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ನಡೆದಿದೆ.

ಗುಡ್ಡೆಕೊಪ್ಲ ನಿವಾಸಿ ಸಂದೇಶ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಸುರತ್ಕಲ್ ಜಂಕ್ಷನ್ ಬಳಿಯಿರುವ ಬಾರ್ ಮುಂಭಾಗ ಈ ಘಟನೆ ನಡೆದಿದೆ. ಗೆಳೆಯರ ನಡುವೆ ಉಂಟಾದ  ಭಿನ್ನಾಭಿಪ್ರಾಯವೇ ಕೊಲೆಗೆ ಕಾರಣ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News