ಮಹಾರಾಷ್ಟ್ರ: ಸೇತುವೆಯಿಂದ ವಾಹನ ಕೆಳಕ್ಕೆ ಉರುಳಿ 7 ಸಾವು

Update: 2019-11-30 05:09 GMT

ಮುಂಬೈ, ನ.30:  ವಿಂಚೂರ್ ಬಳಿಯ ನದಿಯೊಂದರ ಸೇತುವೆಯಿಂದ ಪಿಕಪ್ ವಾಹನ ಕೆಳಗೆ ಬಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಮಹಾರಾಷ್ಟ್ರದ  ಎರಡು  ಜಿಲ್ಲೆಗಳಲ್ಲಿ  ಕಳೆದ 24 ಗಂಟೆಗಳಲ್ಲಿ  ಸಂಭವಿಸಿದ ಎರಡು ರಸ್ತೆ ಅಪಘಾತಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 

ಏತನ್ಮಧ್ಯೆ, ಶುಕ್ರವಾರ ಮುಂಜಾನೆ ಪುಣೆ-ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯ ರಸಾಯಾನಿ ಪಟ್ಟಣದ ಬಳಿ ಪ್ರಯಾಣಿಸುತ್ತಿದ್ದ ಕಾರು ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ  ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ತೀವ್ರ ಗಾಯಗೊಂಡಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News