ಉಪ ಚುನಾವಣೆ: ಶಿವಾಜಿನಗರಕ್ಕಾಗಿ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

Update: 2019-11-30 17:23 GMT

ಬೆಂಗಳೂರು, ನ.30: ಡಿ.5ರಂದು ನಡೆಯಲಿರುವ ಉಪಚುನಾವಣೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷ ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕಾಗಿ ವಿಶೇಷ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿತು.

ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಶರವಣ ಮಾತನಾಡಿ, ಶಿವಾಜಿ ನಗರ ಅಭಿವೃದ್ಧಿಗೆ ಜೆಡಿಎಸ್ ಬದ್ಧವಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ನಿಂದ ಸ್ಪರ್ಧಿಸಿರುವ ತನ್ವೀರ್ ಅಹ್ಮದ್ ಉಲ್ಲಾಹ್ ಶ್ರಮಿಸಲಿದ್ದಾರೆ. ನಗರದ ವಿವಿಧ ಕ್ಷೇತ್ರಗಳಿಕೆ ಹೋಲಿಕೆ ಮಾಡಿದರೆ ಶಿವಾಜಿ ನಗರ ಸಂಪೂರ್ಣವಾಗಿ ಹಿಂದೆ ಉಳಿದಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಜೆಡಿಎಸ್ ಅಭ್ಯರ್ಥಿಗೆ ಮತದಾರರು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಿವಾಜಿನಗರ ನಿವಾಸಿಗಳ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಹೆಚ್ಚಿ ಪ್ರಾಶಸ್ತ್ಯ ನೀಡಲಾಗುವುದು. ಉತ್ತಮ ಆರೋಗ್ಯ, ಸ್ವಚ್ಛ ನಗರ, ಸ್ವಚ್ಛ ನೀರು ಮತ್ತು ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜೆಡಿಎಸ್ ಪಕ್ಷ ಮನ್ನಣೆ ನೀಡಿಲಿದೆ. ಶಿವಾಜಿ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಬದಲಾವಣೆ ಮಾಡಲಿದ್ದೇವೆ ಎಂದು ಅವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News