ಬಂಟ್ವಾಳ : ಡಿ. 4ರಂದು ಎಸ್ಡಿಪಿಐ ವತಿಯಿಂದ ಸನ್ಮಾನ-ಅಭಿನಂದನಾ ಕಾರ್ಯಕ್ರಮ

Update: 2019-12-01 11:54 GMT

ಬಂಟ್ವಾಳ, ಡಿ. 1: ಎಸ್ಡಿಪಿಐ ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ನೂತನ ಪುರಸಭಾ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಪಕ್ಷದ ಕಾರ್ಪೊರೇಟರ್ ಗಳಿಗೆ ಸನ್ಮಾನ ಕಾರ್ಯಕ್ರಮ ಡಿ. 4ರಂದು ಸಂಜೆ 6:30ಕ್ಕೆ ತಲಪಾಡಿ ಅಲ್-ಖಝಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಎಸ್ಡಿಪಿಐ ಪುರಸಭಾ ಸಮಿತಿ ಅಧ್ಯಕ್ಷ ಮುನೀಶ್ ಅಲಿ ತಿಳಿಸಿದ್ದಾರೆ.

ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಅಬ್ದುಲ್ ಮಜೀದ್ ಖಾನ್ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮುನೀಶ್ ಅಲಿ ಅಧ್ಯಕ್ಷತೆ ವಹಿಸುವರು. ಪಿಎಫ್‍ಐ ರಾಜ್ಯ ಸಮಿತಿ ಸದಸ್ಯ ಎ.ಕೆ ಅಶ್ರಫ್ ಮುಖ್ಯ ಭಾಷಣ ಮಾಡುವರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಉಪಾಧ್ಯಕ್ಷ ಇಕ್ಬಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್, ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ ಮತ್ತಿತರರು ಭಾಗವಹಿಸುವರು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News