ವೈದ್ಯೆಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಬಹುದೇ?: ತೆಲಂಗಾಣದ ವಕೀಲರು ಹೇಳಿದ್ದಿಷ್ಟು...

Update: 2019-12-01 13:20 GMT

ತೆಲಂಗಾಣ: ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಪ್ರತಿನಿಧಿಸದೇ ಇರಲು ಇಲ್ಲಿನ ಜಿಲ್ಲಾ ಬಾರ್ ಅಸೋಸಿಯೇಶನ್ ನಿರ್ಧರಿಸಿದೆ.

"ಆರೋಪಿಗಳ ಹೀನ ಅಪರಾಧದ ವಿರುದ್ಧ ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ" ಎಂದು ರಂಗಾರೆಡ್ಡಿ ಬಾರ್ ಅಸೋಸಿಯೇಶನ್ ನ ಅಧ್ಯಕ್ಷ ಮಟ್ಟಪಲ್ಲಿ ಶ್ರೀನಿವಾಸ್ ಹೇಳಿದ್ದಾರೆ.

ಆರೋಪಿಗಳಿಗೆ ಯಾವುದೇ ಕಾನೂನು ನೆರವು ನೀಡುವುದಿಲ್ಲ ಎಂದು ನಾವು ನಿರ್ಧರಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಆರೋಪಿಗಳಿಗೆ ಕಾನೂನು ನೆರವು ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕೋರ್ಟ್ ಆದೇಶಿಸಬಹುದು. ಪ್ರಾಧಿಕಾರವು ಈ ಆದೇಶ ನೀಡಿದರೆ ನಮಗೆ ನಿರಾಕರಿಸಲು ಸಾಧ್ಯವಿಲ್ಲ ಎಂದವರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ದಾಖಲಾಗಿರುವ ಕೆಲವು ಸೆಕ್ಷನ್ ಗಳನ್ನು ಗಮನಿಸಿದರೆ ಗಲ್ಲುಶಿಕ್ಷೆಯಾಗುವ ಸಾಧ್ಯತೆಯೂ ಇದೆ ಎಂದವರು ಇದೇ ಸಂದರ್ಭ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News