ಹನೂರು: ರಸ್ತೆಯಲ್ಲೇ ಹರಿದ ಚರಂಡಿ ನೀರು; ಸಂಚಾರಕ್ಕೆ ಅಡಚಣೆ

Update: 2019-12-01 18:37 GMT

ಹನೂರು, ಡಿ.1: ಭಾನುವಾರ ಸುರಿದ ಮಳೆಯಿಂದಾಗಿ ಚರಂಡಿ ನೀರು ರಸ್ತೆಯಲ್ಲೇ ಹರಿದು ಸಂಚಾರಕ್ಕೆ ಅಡಚಣೆಯಾಗಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ.

ಸಂಜೆ ಸುಮಾರು 1 ಗಂಟೆಗಳ ಕಾಲ ಸುರಿದ ಮಳೆಗೆ ಕೊಳ್ಳೇಗಾಲ- ಮಲೆಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿರುವ ಹಳೆ ಚರಂಡಿಯ ನೀರು ರಸ್ತೆ ಮೇಲೆ ಹರಿದ ಪರಿಣಾಮ ಜನರು ಪರದಾಡುವಂತಾಯಿತು. ದುರ್ನಾತ ಬೀರುತ್ತಿದ್ದ ಚರಂಡಿ ನೀರಿನಿಂದಾಗಿ ಜನರು ಮೂಗು ಮುಚ್ಚಿಕೊಂಡು ಸಂಚರಿಸು­ ಸ್ಥಿತಿ ನಿರ್ಮಾಣವಾಗಿತ್ತು.

ಅಲ್ಲದೆ ರಾಮಾಪುರ ಮುಖ್ಯರಸ್ತೆಯಲ್ಲಿ ಚರಂಡಿ ನೀರು ನುಗ್ಗಿದ ಪರಿಣಾಮ 1 ಗಂಟೆಗೂ ಹೆಚ್ಚು ಸಮಯ­ವನ್ನು ಅಂಗಡಿಗಳಲ್ಲಿಯೇ ಕಳೆಯು­ವಂತಾಯಿತು. ಚರಂಡಿ ನೀರು ರಸ್ತೆಗೆ ನುಗ್ಗಿದ್ದರಿಂದ ಕೌದಳ್ಳಿ ಗ್ರಾಮಕ್ಕೆ ಬಂದಿದ್ದ ನೂರಾರು ಜನ ತೀವ್ರ ತೊಂದರೆ ಅನುಭವಿಸಿದರು. ಚರಂಡಿ ನೀರು ನಿಂತ ಕಾರಣ ಸುಮಾರು ಹಲವು ತಾಸುಗಳ ಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News