ಬೆಂಗಳೂರು: ವಿವಾಹಿತೆ ನಿಗೂಢ ಸಾವು

Update: 2019-12-03 12:49 GMT

ಬೆಂಗಳೂರು, ಡಿ.3: ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಆಶಾರಾಣಿ(30) ಮೃತ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ ವಿವಾಹವಾಗಿದ್ದು, ಇಲ್ಲಿನ ಪೀಣ್ಯದ ಎಸ್‌ಆರ್‌ಎಸ್ ರಸ್ತೆಯ ಮನೆಯಲ್ಲಿ ವಾಸವಿದ್ದರು. ಕೆಲದಿನಗಳಿಂದ ದಂಪತಿ ನಡುವೆ ಜಗಳ ನಡೆಯುತಿತ್ತು ಎನ್ನಲಾಗಿದೆ.

ಸೋಮವಾರ ಆಶಾರಾಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈಕೆಯ ಪೋಷಕರು ಶಂಕೆ ವ್ಯಕ್ತಪಡಿಸಿ, ಆರ್‌ಎಂಸಿ ಯಾರ್ಡ್ ಠಾಣಾ ಪೊಲೀಸರು ದೂರು ನೀಡಿದ್ದು, ಇದರನ್ವಯ ರವಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News