ರಾಜ್ಯದ 19 ಕೇಂದ್ರಗಳಲ್ಲಿ ಡಿ.27ರಿಂದ ಕಸಾಪ ಪರೀಕ್ಷೆ

Update: 2019-12-03 17:49 GMT

ಬೆಂಗಳೂರು, ಡಿ.3: ಕನ್ನಡ ಸಾಹಿತ್ಯ ಪರಿಷತ್ತಿನ 2019-20ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿ.27, 28 ಮತ್ತು 30ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಪತ್ರಗಳನ್ನು ಈಗಾಗಲೇ ಅಂಚೆ ಮೂಲಕ ಕಳುಹಿಸಲಾಗಿದೆ. ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ ಚನ್ನೇಗೌಡ ಅವರನ್ನು ವಿಚಾರಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ 080-26623584ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News