ಉಪ್ಪಳದಲ್ಲಿ ಯುವಕನ ಮೇಲೆ ತಲವಾರು ದಾಳಿ

Update: 2019-12-04 03:57 GMT

ಮಂಜೇಶ್ವರ, ಡಿ.4: ತಂಡವೊಂದು ಯುವಕನೋರ್ವನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಕಳೆದ ರಾತ್ರಿ ಉಪ್ಪಳ ಪೇಟೆಯಲ್ಲಿ ನಡೆದಿರುವುದು ವರದಿಯಾಗಿದೆ.

ಉಪ್ಪಳ ನಿವಾಸಿ ಮುಸ್ತಫಾ ದಾಳಿಗೊಳಗಾದ ಯುವಕ. ಇವರು ಮಂಗಳವಾರ ರಾತ್ರಿ 11 ಘಂಟೆ ಸುಮಾರಿಗೆ ಜಿಮ್ ಗೆ ತೆರಳಿ ಮರಳುತ್ತಿದ್ದ ವೇಳೆ ಈ ದಾಳಿ ನಡೆದಿದೆ.

ಕಾರಿನಲ್ಲಿ ಬಂದ ತಂಡವು ಉಪ್ಪಳ ಪೇಟೆಯಲ್ಲಿ ಮುಸ್ತಫಾರನ್ನು ತಡೆದು ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದೆ ಎನ್ನಲಾಗಿದೆ.

ದಾಳಿಯಿಂದ ಗಂಭೀರ ಗಾಯಗೊಂಡ ಮುಸ್ತಫಾರನ್ನು ತಕ್ಷಣ ಉಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಂಜೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News