ಕಡಬ: ದಿನಸಿ ಅಂಗಡಿಯಿಂದ ಕಳವು

Update: 2019-12-04 04:52 GMT

ಕಡಬ, ಡಿ.4: ಕಡಬ ಸಮೀಪದ ಪೇರಡ್ಕ ಎಂಬಲ್ಲಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಪೇರಡ್ಕ ಎಂಬಲ್ಲಿ ಉಮರ್ ಪೊಸವಳಿಕೆ ಹಾಗೂ ಮುಹಮ್ಮದ್ ಪೆಲತ್ರಾಣೆ ಎಂಬವರಿಗೆ ಸೇರಿದ ಅಂಗಡಿಗೆ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗಿನ ಜಾವದ ನಡುವೆ ನುಗ್ಗಿರುವ ಕಳ್ಳರು ಅಂಗಡಿಯೊಳಗಿದ್ದ ಅಕ್ಕಿ, ಎಣ್ಣೆ ಸೇರಿದಂತೆ ದಿನಸಿ ಸಾಮಾನುಗಳನ್ನು ಕದ್ದೊಯ್ದಿದ್ದಾರೆ.

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News