ಮಂಡ್ಯ: ಆರ್‍ಟಿಒ ಕಚೇರಿಗೆ ಲೋಕಾಯಕ್ತ ದಾಳಿ

Update: 2019-12-04 17:26 GMT

ಮಂಡ್ಯ, ಡಿ.4: ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಕಡತ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.

ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಇನ್ಸ್‍ಪೆಕ್ಟರ್ ಗಳಾದ ಶಶಿಕುಮಾರ್, ರವಿಕಿರಣ್ ನೇತೃತ್ವದಲ್ಲಿ ದಾಳಿ ನಡೆಯಿತು.

ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಡತ, ದಾಖಲೆಗಳು ಹಾಗೂ ಕಂಪ್ಯೂಟರ್ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಲ್ಲದೆ, ಆರ್‍ಟಿಒ ಟಿ.ಪುರುಪೋತ್ತಮ ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಲೋಕಾಯುಕ್ತರು ಕಚೇರಿಗೆ ದಾಳಿ ನಡೆಸಿ ಅಧಿಕಾರಿ, ಸಿಬ್ಬಂದಿಗಳ ವಿಚಾರಣೆ ನಡೆಸುತ್ತಿದ್ದ ವೇಳೆ, ಅಲ್ಲಿಯೇ ಮಧ್ಯವರ್ತಿಗಳ ಹಾವಳಿ ಇದ್ದರೂ ಗಮನಿಸಲಿಲ್ಲ ಎಂದು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News