ಸೌರಾಷ್ಟ್ರ ರಣಜಿ ತಂಡದಲ್ಲಿ ಚೇತೇಶ್ವರ ಪೂಜಾರ

Update: 2019-12-04 18:13 GMT

ರಾಜ್‌ಕೋಟ್, ಡಿ.4: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಡಿ.9ರಿಂದ ಆರಂಭವಾಗಲಿರುವ ರಣಜಿ ಟ್ರೋಫಿಯ ಮೊದಲೆರಡು ಪಂದ್ಯಗಳಿಗೆ ಸೌರಾಷ್ಟ್ರ ಬುಧವಾರ ಪ್ರಕಟಿಸಿರುವ 16 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

 ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಹಿರಿಯರ ಆಯ್ಕೆ ಸಮಿತಿಯು ರಣಜಿ ಟ್ರೋಫಿಯ ಮೊದಲೆರಡು ಪಂದ್ಯಗಳಿಗೆ 16 ಸದಸ್ಯರುಗಳನ್ನು ಒಳಗೊಂಡ ಸೌರಾಷ್ಟ್ರ ಸೀನಿಯರ್ ತಂಡವನ್ನು ಆಯ್ಕೆ ಮಾಡಿದೆ. ತಂಡವನ್ನು ಎಡಗೈ ವೇಗದ ಬೌಲರ್ ಜಯದೇವ್ ಉನದ್ಕಟ್ ಮುನ್ನಡೆಸಲಿದ್ದಾರೆ ಎಂದು ಪ್ರಕಟನೆಯೊಂದರಲ್ಲಿ ತಿಳಿಸಲಾಗಿದೆ. ಎರಡು ತಿಂಗಳ ವಿರಾಮದ ಬಳಿಕ ಭಾರತ ತಂಡ ನ್ಯೂಝಿಲ್ಯಾಂಡ್‌ನಲ್ಲಿ ಟೆಸ್ಟ್ ಸರಣಿ ಆಡುತ್ತಿರುವ ಹಿನ್ನೆಲೆಯಲ್ಲಿ ಪೂಜಾರ ಅವರಿಗೆ ರಣಜಿ ಟ್ರೋಫಿ ಉತ್ತಮ ಅಭ್ಯಾಸ ಪಂದ್ಯವಾಗಲಿದೆ. ಭಾರತದ ಮಾಜಿ ವೇಗದ ಬೌಲರ್ ಕರ್ಸನ್ ಘಾವ್ರಿ ಸೌರಾಷ್ಟ್ರದ ಮುಖ್ಯ ಕೋಚ್ ಆಗಿ ಈಗಾಗಲೇ ನೇಮಕಗೊಂಡಿದ್ದಾರೆ. ಕಳೆದ ಋತುವಿನ ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ರನ್ನರ್ಸ್ ಅಪ್ ಪ್ರಶಸ್ತಿ ಜಯಿಸಿತ್ತು. ಎಲೈಟ್ ಗ್ರೂಪ್ ಬಿನಲ್ಲಿ ಸ್ಥಾನ ಪಡೆದಿರುವ ಸೌರಾಷ್ಟ್ರ ತಂಡ ಧರ್ಮಶಾಲಾದಲ್ಲಿ ಹಿಮಾಚಲ ಪ್ರದೇಶ ವಿರುದ್ಧ ಪಂದ್ಯ ಆಡುವುದರೊಂದಿಗೆ ತನ್ನ ರಣಜಿ ಅಭಿಯಾನ ಆರಂಭಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News