ಚಿದಂಬರಂಗೆ ಜಾಮೀನು....

Update: 2019-12-04 18:23 GMT

ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಆಗಸ್ಟ್ 21ರಿಂದಲೂ ಜೈಲಿನಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕ , ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರುಗೊಳಿಸಿದೆ. ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಜಾಮೀನು ಮಂಜೂರು ಗೊಳಿಸಿದ್ದು 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್, ಇಷ್ಟೇ ಮೊತ್ತದ ಎರಡು ಜಾಮೀನು ಮುಚ್ಚಳಿಕೆ ಒದಗಿಸುವಂತೆಯೂ ಸೂಚಿಸಲಾಗಿದೆ. ಚಿದಂಬರಂ ವಿಚಾರಣೆಗೆ ಸಹಕರಿಸಿದ್ದರು ಎಂಬುದನ್ನು ಮನಗಂಡಿದ್ದು ಮುಂದಕ್ಕೂ ಸಹಕರಿಸಬೇಕು. ಅಲ್ಲದೆ ಜಾಮೀನು ಅವಧಿಯಲ್ಲಿ ಪ್ರಕರಣದ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು. ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಸಾಕ್ಷ ನಾಶಪಡಿಸಲು ಪ್ರಯತ್ನಿಸಬಾರದು ಎಂಬ ಶರತ್ತು ವಿಧಿಸಿ ಜಾಮೀನು ಮಂಜೂರುಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor