ಬಿಜೆಪಿ ಸರ್ಕಾರ ಪೂರ್ಣಾವಧಿ ಪೂರೈಸಲಿದೆ: ಸಚಿವ ಈಶ್ವರಪ್ಪ

Update: 2019-12-05 11:47 GMT

ಶಿವಮೊಗ್ಗ, ಡಿ.5: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಬಿಜೆಪಿ ಸರ್ಕಾರ ಪೂರ್ಣಾವದಿ ಪೂರೈಸಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

ಗುರುವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಸ್ತುತ ಕಾಂಗ್ರೆಸ್‍ನವರು ದಲಿತ ಸಮುದಾಯಕ್ಕೆ ಸೇರಿದವರನ್ನು ಸಿಎಂ ಮಾಡಲಾಗುವುದು ಎನ್ನುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆರವರನ್ನು ಮುಖ್ಯಮಂತ್ರಿ ಮಾಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದು ಆ ಪಕ್ಷದವರೇ ಹೇಳುತ್ತಿದ್ದಾರೆ. ಆದರೆ ಯಾವ ರಾಜ್ಯಕ್ಕೆ ಮುಖ್ಯಮಂತ್ರಿ ಮಾಡುತ್ತಾರೋ ಗೊತ್ತಿಲ್ಲ. ಮೂರುವರೆ ವರ್ಷ ಬಿಜೆಪಿ ಸರ್ಕಾರ ಇರಲಿದೆ. ಯಡ್ಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. 

ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ 78 ಸ್ಥಾನ ಗೆದ್ದಿತ್ತು. ಈಗ 62ಕ್ಕೆ ಬಂದಿಳಿದಿದೆ. ನಾವು ಆಪರೇಷನ್ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್‍ನಲ್ಲಿ ಲೈಫ್ ಇಲ್ಲ ಎಂದು ತಿಳಿದು ಕಾಂಗ್ರೆಸಿಗರೇ ಬಿಜೆಪಿಗೆ ಬರುತ್ತಿದ್ದಾರೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News