ಹರಾಮಿ ದುಡ್ಡು ಖರ್ಚು ಮಾಡಲು ಚುನಾವಣೆಯಲ್ಲಿ ಲಖನ್ ಸ್ಪರ್ಧೆ: ರಮೇಶ್ ಜಾರಕಿಹೊಳಿ

Update: 2019-12-05 13:35 GMT

ಬೆಳಗಾವಿ, ಡಿ.5: ಹರಾಮಿ ಹಣವನ್ನು ಖರ್ಚು ಮಾಡುವ ಸಲುವಾಗಿ ಲಖನ್ ಜಾರಕಿಹೊಳಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾನೆ. ಗೋಕಾಕ್‌ನಲ್ಲಿ ಅಣ್ಣ ತಮ್ಮಂದಿರ ಮಧ್ಯೆ ಈತ ಜಗಳ ಹಚ್ಚುವ ತಂತ್ರ ಹೂಡಿದ್ದಾನೆ ಎಂಬುದು ನನಗೆ ಗೊತ್ತಿರಲಿಲ್ಲ. ಅವನ ಸಹವಾಸವೆ ನನಗೆ ಬೇಡ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಲಖನ್ ವಿರುದ್ಧ ಕಿಡಿಕಾರಿದ್ದಾರೆ.

ಗುರುವಾರ ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ರಮೇಶ್ ಜಾರಕಿಹೊಳಿ ಮತದಾನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ವಿರುದ್ಧ ಏಕ ವಚನದಲ್ಲಿಯೇ ಮಾತನಾಡಿದರು. ಸಹೋದರ ಸತೀಶ್ ಜಾರಕಿಹೊಳಿ ಬಗ್ಗೆಯೂ ಅಸಮಾಧಾನ ಹೊರಹಾಕಿದ ಅವರು, ಸತೀಶ್ ಜಾರಕಿಹೊಳಿ ತುಳಿದಷ್ಟು ನಾನು ಬೆಳೆದಿದ್ದೇನೆ. ಸಿದ್ದರಾಮಯ್ಯ ಸೇರಿದಂತೆ ನಾನು ಯಾರ ವಿರುದ್ಧವೂ ಈವರೆಗೆ ವೈಯಕ್ತಿಕ ದಾಳಿ ನಡೆಸಿಲ್ಲ. ಎದುರಾಳಿಯ ಬಗ್ಗೆ ಹಗುರವಾಗಿ ಮಾತನಾಡಲ್ಲ. ಆದರೆ, ಈ ಬಾರಿಯ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ 15 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಅಥವಾ ಜೆಡಿಎಸ್ ಒಂದು ಸ್ಥಾನದಲ್ಲಿ ಗೆಲ್ಲುವುದೂ ಸಹ ಕಷ್ಟ ಎಂದು ಭವಿಷ್ಯ ನುಡಿದಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದ ರಮೇಶ್ ಜಾರಕಿಹೊಳಿ, ಬಸ್ ಸ್ಟಾಂಡ್‌ನಲ್ಲಿ ಹೂ, ಎಸ್‌ಟಿಡಿ ಬೂತ್‌ನಲ್ಲಿ ಚಿಲ್ಲರೆ ಎಣಿಸಿದ ಹೆಣ್ಣು ಮಗಳ ಬಗ್ಗೆ ನಾನು ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News