ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಎನ್‌ಎಸ್‌ಯುಐ ಆಗ್ರಹ

Update: 2019-12-05 14:48 GMT

ಉಡುಪಿ, ಡಿ.5: ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಮತ್ತು ಕಲಬುರಗಿ ಜಿಲ್ಲೆಯ ಬಾಲಕಿಯ ಮೇಲೆ ನಡೆದ ಹೀನ ಕೃತ್ಯದ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ.

ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಆದರೆ, ಅಪರಾಧಿ ಗಳಿಗೆ ಶಿಕ್ಷೆಯ ಪ್ರಮಾಣ ಬಹಳ ಕಡಿಮೆ ಪ್ರಮಾಣದಲ್ಲಿ ಆಗುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರಿಗೆ ಅಸುರಕ್ಷಿತ ಭಾವನೆ ಬೇರೂರಿದ್ದು, ಈ ಎರಡೂ ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಹಸ್ತಾಂತರಿಸಿ ಅತ್ಯಾಚಾರಿ ಗಳು ಹಾಗೂ ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿ ಆಲ್ಮೇಡಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News