ಜೆಡಿಎಸ್ ಬೂತ್ ಏಜೆಂಟ್ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಆರೋಪ
Update: 2019-12-05 15:32 GMT
ಬೆಂಗಳೂರು, ಡಿ.5: ಯಶವಂತಪುರ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಬೂತ್ ಏಜೆಂಟ್ ಓರ್ವನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಗರದ ಅಂಚೆಪಾಳ್ಯ ಮತಗಟ್ಟೆ ಹತ್ತಿರ ನಡೆದಿದೆ ಎನ್ನಲಾಗಿದೆ.
ಬೂತ್ ಏಜೆಂಟರನ್ನು ಒಳಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಜೆಡಿಎಸ್ ಬೂತ್ ಏಜೆಂಟರ ಮೇಲೆ ಗ್ರಾ.ಪಂ ಅಧ್ಯಕ್ಷರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎಂದು ತಿಳಿದು ಬಂದಿದೆ.