ಮಂಗಳೂರು: ಇಂಡಿಯನ್ ಕೋಸ್ಟ್ಗಾರ್ಡ್ ಅಧಿಕಾರಿ ಆತ್ಮಹತ್ಯೆ
Update: 2019-12-05 17:17 GMT
ಮಂಗಳೂರು, ಡಿ.5: ಇಂಡಿಯನ್ ಕೋಸ್ಟ್ಗಾರ್ಡ್ ಅಧಿಕಾರಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಹರ್ಯಾಣ, ಕುಂಜತ್ತ್ಬೈಲ್ ಕ್ವಾಟ್ರಸ್ ನಿವಾಸಿ ಪವನ್ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಇಂಡಿಯನ್ ಕೋಸ್ಟ್ಗಾರ್ಡ್ ಅಧಿಕಾರಿಯಾಗಿದ್ದ ಪವನ್ ಕುಮಾರ್ ಕೌಟುಂಬಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದರು. ಬುಧವಾರ ಬೆಳಗ್ಗೆ ಮನೆಯವರ ಅರಿವಿಗೆ ಬಾರದೆ ಕ್ವಾಟ್ರರ್ಸ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಮೃತದೇಹವನ್ನು ಮಹಜರು ನಡೆಸಿದ ಬಳಿಕ ಮೃತರ ಸ್ವಂತ ಊರಾದ ಹರ್ಯಾಣಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.