ಕಾಸರಗೋಡು: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕ ಆತ್ಮಹತ್ಯೆ

Update: 2019-12-06 08:15 GMT

ಕಾಸರಗೋಡು, ಡಿ.6: ಕೆಎಸ್ಸಾರ್ಟಿಸಿ ಬಸ್ಸು ಚಾಲಕನೋರ್ವ ಡಿಪೋದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ನೀಲೇಶ್ವರ ಪಳ್ಳಿಕೆರೆಯ ಪಿ.ವಿ.ಸುಕುಮಾರನ್( 48) ಆತ್ಮಹತ್ಯೆ ಮಾಡಿಕೊಂಡವರು.

ಗುರುವಾರ ರಾತ್ರಿ ಕಾಸರಗೋಡು ಕೆಎಸ್ಸಾರ್ಟಿಸಿ ಡಿಪೋದ ಒಂದನೇ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದು, ಕೂಡಲೇ ಅವರನ್ನು ಉಳಿದ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ವೇತನ ಮೊಟಕುಗೊಂಡಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
  
ಸುಕುಮಾರನ್ ಅವರ ತಂದೆ ಕೆಲ ದಿನಗಳ ಹಿಂದೆ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ 20 ದಿನಗಳ ರಜೆಯಲ್ಲಿ ತೆರಳಿದ್ದರು. ಅವರು ಮತ್ತೆ ಗುರುವಾರ ರಾತ್ರಿ ಕೆಲಸಕ್ಕೆ ಹಾಜರಾಗಿದ್ದರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News