ಖಾಸಗಿ ಕಂಪೆನಿ ಉದ್ಯೋಗಿ ಆತ್ಮಹತ್ಯೆ
Update: 2019-12-06 13:00 GMT
ಬೆಂಗಳೂರು, ಡಿ.6: ಮಹಿಳೆಯೊಬ್ಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಶಾಂತ್ ನಗರದ ಆಶಾ (30) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.
ಸತ್ಯನಾರಾಯಣ ಎಂಬವರನ್ನು ವಿವಾಹವಾಗಿದ್ದ ಆಶಾ ಅವರು, ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಶೀಲ ಶಂಕಿಸಿ ಪತಿ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಇದರಿಂದ ಬೇಸತ್ತು ಗುರುವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ದೂರು ದಾಖಲಿಸಿಕೊಂಡಿರುವ ರಾಜಾಜಿನಗರ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.