ಉಡುಪಿ: ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ

Update: 2019-12-06 14:54 GMT

ಉಡುಪಿ, ಡಿ.6: ಭಾರತರತ್ನ ಡಾ.ಬಿ.ಅರ್.ಅಂಬೇಡ್ಕರ್ ಅವರ 63ನೇ ಪರಿನಿರ್ವಾಣ ದಿನದ ಅಂಗವಾಗಿ ಮಣಿಪಾಲದ ರಜತಾದ್ರಿಯ ಜಿಲ್ಲಾ ಕಚೇರಿಗಳ ಸಂಕಿರ್ಣದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾಲಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಶೋಭಾ ಜಿ.ಪುತ್ರನ್, ಪ್ರತಾಪ್ ಹೆಗ್ಡೆ ಮಾರಾಳಿ, ಸುಪ್ರೀತ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಸುಂದರ ಮಾಸ್ತರ್, ಶಂಕರ್‌ದಾಸ್ ಚಂಡ್ಕಳ, ಪರಮೇಶ್ವರ ಉಪ್ಪೂರು, ಪ್ರಸಾದ್, ಶಂಕರ ಕೊಡಂಕೂರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News