ಕಟೀಲು ಯಕ್ಷಗಾನ ಮೇಳ ವಿವಾದ : ಡಿ. 7ರಂದು ಸಭೆ ಕರೆದ ಡಿಸಿ
Update: 2019-12-06 15:34 GMT
ಮಂಗಳೂರು, ಡಿ.6: ಕಟೀಲು ಯಕ್ಷಗಾನ ಮೇಳದಿಂದ ಭಾಗವತ ಸತೀಶ್ ಪಟ್ಲ ಅವರನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಡಿ.7ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇಳದ ಮುಖ್ಯಸ್ಥರು ಮತ್ತು ಪಟ್ಲರನ್ನು ಕರೆಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತುಕತೆ ನಡೆಸಲಿದ್ದಾರೆ.
ಜಿಲ್ಲಾಧಿಕಾರಿ ಮುಂದಾಳತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕಟೀಲು ಮೇಳದ ಯಜಮಾನ ದೇವಿಪ್ರಸಾದ ಶೆಟ್ಟಿ ಹಾಗೂ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಕಟೀಲು ಮೇಳದಲ್ಲಿ ಭಾಗವತಿಕೆ ಮಾಡಲು ಅವಕಾಶ ನೀಡಬೇಕೆಂದು ಸತೀಶ್ ಪಟ್ಲ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೇಳದ ಮುಖ್ಯಸ್ಥರನ್ನು ಹಾಗೂ ಪಟ್ಲರನ್ನು ಮಾತುಕತೆಗೆ ಕರೆಯಲಾಗಿದೆ ಎಂದು ಹೇಳಿದ್ದಾರೆ.