ವಿಶೇಷ ಚೇತನ ಮಕ್ಕಳ ಜೊತೆ ಜನ್ಮ ದಿನ ಆಚರಿಸಿದ ಶಾಸಕ ವೇದವ್ಯಾಸ್ ಕಾಮತ್

Update: 2019-12-07 14:01 GMT

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ತನ್ನ 42 ನೇ ಜನ್ಮ ದಿನವನ್ನು ವಿಶೇಷ ಮಕ್ಕಳ ಜೊತೆ ಸಿಹಿ ಹಂಚಿಕೊಂಡು ಆಚರಿಸಿದ್ದಾರೆ.

ಶಕ್ತಿನಗರದ ಸಾನಿಧ್ಯ ವಿಶೇಷ ಚೇತನ ಮಕ್ಕಳ ಶಾಲೆಗೆ ತೆರಳಿ ಮಕ್ಕಳ ಜೊತೆ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿ ಮಾದರಿಯಾಗಿದ್ದಾರೆ. ಕಳೆದ ವರ್ಷ ತನ್ನ ಜನ್ಮ ದಿನವನ್ನು ಜಪ್ಪು ಭಗಿನಿ ಸಮಾಜದ ಮಕ್ಕಳೊಂದಿಗೆ ಆಚರಿಸಿದ್ದ ಶಾಸಕರು ಈ ಬಾರಿಯೂ ಅದನ್ನೇ ಮುಂದುವರಿಸಿದ್ದಾರೆ. ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಉಪಹಾರ ಸವಿದು ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ಮಕ್ಕಳನ್ನು ದೈವ ಸಮಾನ ಎನ್ನುತ್ತಾರೆ. ಹಾಗಾಗಿ ದೈವ ಸಾನಿಧ್ಯದಲ್ಲಿ ಹುಟ್ಟು ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಿಕೊಂಡಿದ್ದೇನೆ. ಆ ಮಕ್ಕಳೊಂದಿಗೆ ಕಳೆಯುವ ಕ್ಷಣಗಳನ್ನು, ಆ ಅನುಭವವನ್ನು ವಿವರಿಸುವುದು ಅಸಾಧ್ಯ ಎಂದಿದ್ದಾರೆ. ಈ ಸಂದರ್ಭದಲ್ಲಿ ಸಾನಿಧ್ಯ ವಿಶೇಷ ಚೇತನ ಮಕ್ಕಳ ಶಾಲೆಯ ಆಡಳಿತ ಮಂಡಳಿ ಸದಸ್ಯರು,ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News