ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‌ಕ್ಲಾಸ್ ಬಸ್

Update: 2019-12-07 17:11 GMT

 ಮಂಗಳೂರು, ಡಿ.7: ಕೆಎಸ್ಸಾರ್ಟಿಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್‌ಗೆ ಹಾಗೂ ಹೈದರಾಬಾದ್‌ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿಆಕ್ಸ್‌ಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಈ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ ‘ಅಂಬಾರಿ ಡ್ರೀಮ್‌ಕ್ಲಾಸ್ ಮಲ್ಟಿಅಕ್ಸ್‌ಲ್ ಎ.ಸಿ. ಸ್ಲೀಪರ್’ ವಾಹನವನ್ನು ಡಿ.9ರಿಂದ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.

ಮಂಗಳೂರು ಬಸ್ ನಿಲ್ದಾಣದ ಆವರಣದಲ್ಲಿ ಡಿ.9ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ, ನೂತನ ಸಾರಿಗೆಗಳನ್ನು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.

ಈ ಬಸ್ ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ಉಡುಪಿ ಮಣಿಪಾಲ, ಕುಂದಾಪುರ, ಭಟ್ಕಳ ಮಾರ್ಗವಾಗಿ ಹೈದರಾಬಾದ್‌ಗೆ ಮರುದಿನ ಬೆಳಗ್ಗೆ 8:30ಕ್ಕೆ ತಲುಪುತ್ತದೆ. ಮರು ಪ್ರಯಾಣದಲ್ಲಿ ಹೈದರಾಬಾದ್‌ನಿಂದ ಸಂಜೆ 7 ಗಂಟೆಗೆ ಹೊರಟು ರಾಯಚೂರು, ಕುಂದಾಪುರ, ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪುತ್ತದೆ. ಮಂಗಳೂರಿನಿಂದ ಹೈದರಾಬಾದ್‌ಗೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ ರೂ. 1,400.

ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು ಸಾರ್ವಜನಿಕರು ಸಾರಿಗೆಯ ಸದುಪ ಯೋಗ ಪಡೆದುಕೊಳ್ಳಬಹುದು ಎಂದು ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News