ನನ್ನ ಪುತ್ರಿಗೆ ನಿರಂತರ ಬೆದರಿಕೆ ಇತ್ತು: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆ

Update: 2019-12-07 18:33 GMT
Photo: PTI

 ಉನ್ನಾವೊ, ಡಿ. 7: ಇಬ್ಬರು ಆರೋಪಿಗಳಲ್ಲಿ ಓರ್ವನಿಂದ ತನ್ನ ಪುತ್ರಿ ನಿರಂತರ ಬೆದರಿಕೆ ಕರೆ ಸ್ವೀಕರಿಸಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಶಿವಂ ತ್ರಿವೇದಿ ನವೆಂಬರ್‌ನಲ್ಲಿ ಜಾಮೀನು ದೊರಕಿದ ಬಳಿಕ ತನ್ನ ಪುತ್ರಿಗೆ ಹಾಗೂ ಕುಟುಂಬಕ್ಕೆ ನಿರಂತರ ಕರೆ ಮಾಡಿ ಬೆದರಿಕೆ ಒಡ್ಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

ಆದರೆ, ಬಿಜೆಪಿಯ ಹಿರಿಯ ನಾಯಕರು ಅಥವಾ ಸರಕಾರದ ಅಧಿಕಾರಿಗಳು ಯಾರೂ ಕೂಡ ನಮ್ಮ ಕುಟುಂಬವನ್ನು ಭೇಟಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಂತೆ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಯನ್ನು ಹತ್ಯೆಗೈಯಬೇಕು ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News