ಮಂಗಳೂರು: ಗಾಂಜಾ ಸೇವನೆ ಆರೋಪ; ಇಬ್ಬರ ಬಂಧನ
Update: 2019-12-08 06:30 GMT
ಮಂಗಳೂರು, ಡಿ.8: ನಗರದ ಹೊರವಲಯದ ಪಣಂಬೂರು ಚನಲ್ ಎಂಬಲ್ಲಿ ಮಾದಕ ದ್ರವ್ಯ ಗಾಂಜಾ ಸೇವಿಸುತ್ತಿದ್ದರೆಂಬ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಚೆಳ್ಯಾರ್ ನಿವಾಸಿ ನಿಖಿಲ್ (19), ಸುರತ್ಕಲ್ ಮುಕ್ಕ ನಿವಾಸಿ ಮುಹಮ್ಮದ್ ರಾಝಿಕ್ (32) ಬಂಧಿತ ಆರೋಪಿಗಳು.
ಯುವಕರನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.
ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ ಆರ್. ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ ಮತ್ತು ಪೊಲೀಸ್ ಉಪನಿರೀಕ್ಷಕ ಕುಮಾರೇಶನ್ ಹಾಗೂ ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ/ಸಿಬ್ಬಂದಿ ಮುಹಮ್ಮದ್ ಎ.ಎಸ್.ಐ, ಕುಶಲ ಮಣಿಯಾಣಿ, ಸತೀಶ್ ಎಂ. ಇಸಾಕ್ , ಶರಣ್ ಕಾಳಿ ಮತ್ತು ಪಣಂಬೂರು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.