ಉಪಚುನಾವಣೆಯಲ್ಲಿ ಕನಿಷ್ಠ 13 ಸ್ಥಾನಗಳಲ್ಲಿ ಗೆಲುವು: ಸಿಎಂ ಯಡಿಯೂರಪ್ಪ
Update: 2019-12-08 11:39 GMT
ಬೆಂಗಳೂರು, ಡಿ.8: ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 13 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲಬಹುದು. ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಪಕ್ಷವಾಗಿ ಸಂಪೂರ್ಣ ಸಹಕಾರ ನೀಡುವ ವಿಶ್ವಾಸವಿದೆ. ಸರ್ಕಾರದ ಅವಧಿ ಪೂರ್ಣವಾದ ಬಳಿಕ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆ ಫಲಿತಾಂಶದ ಬಳಿಕ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ನಾವು ಆಡಳಿತದಲ್ಲಿ ಮುಂದುವರೆಯುತ್ತೇವೆ. ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಮುಂದುವರೆಯಲಿದೆ ಎಂದರು.