ಬಜ್ಪೆ : ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಕಳವು ಆರೋಪಿ ಸೆರೆ

Update: 2019-12-08 14:39 GMT

ಬಜ್ಪೆ :  ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಕಳವು ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು  ಚಿಕ್ಕಮಗಳೂರು ಇಂದಿರಾ ನಗರದ ಉಪ್ಪಳ್ಳಿ ವಾಟರ್ ಟ್ಯಾಂಕ್ ಬಳಿಯ ನಿವಾಸಿ ಅಬೂಬಕರ್ (63) ಎಂದು ಗುರುತಿಸಲಾಗಿದೆ.

2017ರಲ್ಲಿ ಮಂಗಳೂರು ತಾಲೂಕಿನ ಬಡಗುಳಿಪಾಡಿ ಗ್ರಾಮದ ಗಂಜಿಮಠ ಗಾಂಧಿನಗರದ ದರ್ಖಾಸು ಮನೆಯೊಂದರ  ಹಿಂದಿನ ಬಾಗಿಲು ಮುರಿದು ಒಳ ಪ್ರವೇಶಿಸಿ ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಕುಳವೂರು ಗ್ರಾಮದ ಕುಪ್ಪೆಪದವು ಚರ್ಚ್ ರಸ್ತೆಯ ಮನೆಯೊಂದರಿಂದ ಸುಮಾರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಪೊಲೀಸರು  ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ಮತ್ತೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದು, ಖಚಿತ ಮಾಹಿತಿ ಪಡೆದ ಪೊಲೀಸರು ಚಿಕ್ಕಮಗಳೂರಿನ ಉಪ್ಪಳ್ಳಿಯ ಆತನ ಮನೆಯಿಂದ ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News